Sharanas Vachanas

ಅಜ್ಞಾನವೆಂಬ ತೊಟ್ಟಿಲೊಳಗೆ,
ಜ್ಞಾನವೆಂಬ ಶಿಶುವ ಮಲಗಿಸಿ,
ಸಕಲ ವೇದಶಾಸ್ತ್ರವೆಂಬ ನೇಣ ಕಟ್ಟಿ,
ಹಿಡಿದು ತೂಗಿ ಜೋಗುಳವಾಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ !
ತೊಟ್ಟಿಲು ಮುರಿದು ನೇಣು ಹರಿದು, ಜೋಗುಳ ನಿಂದಲ್ಲದೆ,
ಗುಹೇಶ್ವರನೆಂಬ ಲಿಂಗವ ಕಾಣಬಾರದು.

Comments are closed.